ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ‘ವೈ’ ಕೆಟಗರಿ ಭದ್ರತೆ ನೀಡಿದೆ.
ಪಕ್ಷ ಸಂಘಟನೆಯಲ್ಲಿ ಹೆಚ್ಚು ಸಕ್ರಿಯವಾಗಿರುವ ಅಣ್ಣಾಮಲೈಗೆ ಬೆದರಿಕೆಗಳೂ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರವು ನಿರ್ಧಾರ ಕೈಗೊಂಡಿದೆ. ಇದುವರೆಗೆ ತಮಿಳುನಾಡು ರಾಜ್ಯ ಪೊಲೀಸರು ನೀಡುತ್ತಿರುವ ಭದ್ರತೆ ಬದಲಿಗೆ ಇನ್ನು ಮುಂದೆ ಸಿಆರ್ಪಿಎಫ್ ಯೋಧರು ‘ಸಿಂಗಂ’ಗೆ ಭದ್ರತೆ ನೀಡಲಿದ್ದಾರೆ.
ಜುಲೈ 2021 ರಲ್ಲಿ ಅಣ್ಣಾಮಲೈ ಬಿಜೆಪಿ ಅಧ್ಯಕ್ಷರಾಗಿದ್ದರು. ತಮಿಳುನಾಡಿನ ಬಿಜೆಪಿ ನಾಯಕ ಎಲ್. ಮುರುಗನ್ ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದ ಹುದ್ದೆಗೆ ಇವರ ನೇಮಕ ನಡೆದಿತ್ತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ