ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುರಿದ ಭಾರೀ ಮಳೆಗೆ ಮನೆ ಕುಸಿದು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಿವಾಸಿಗಳಾದ ಪರಮೇಶ್(45), ಜಯಮ್ಮ(40) ಭರತ್(4) ಮೃತ ದುರ್ದೈವಿಗಳು. ಸ್ಥಳೀಯ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಮಾನ್ವಿ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಲೆ ಸುರಿಯುತ್ತಿದ್ದು, ಮನೆ ಕೂಡ ಹಳೆಯದಾದ್ದರಿಂದ ಶಿಥಿಲಗೊಂಡಿತ್ತು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ತೆರಾತ್ರಿ ಮಲಗಿದ್ದ ವೇಳೆಯೇ ಮನೆ ಕುಸಿದು ದುರ್ಘಟನೆ ಸಂಭವಿಸಿದೆ.