ಜಿಂದಾಲ್​​ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿಯ ಜಿಂದಾಲ್ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ.

ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತ ದುರ್ದೈವಿಗಳು. ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್‌ನಲ್ಲಿ ಸಮಸ್ಯೆ ಕಂಡುಬಂದಿದೆ. ಮೂರು ಜನರು ಪೈಪ್ ಸರಿಪಡಿಸಲು ಹೋದರು. ಪೈಪ್ ನಲ್ಲಿ ನೀರು ನಿಲ್ಲದಂತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ವೇಳೆ ನೀರು ಹರಿದು ಬಂದಿದ್ದರಿಂದ ಚೆನ್ನೈ ಮೂಲದ ಮಹದೇವನ್ ನೀರಿನ ಗುಂಡಿಗೆ ಬಿದ್ದಿದ್ದಾರೆ.

ಆತನನ್ನು ಉಳಿಸುವ ಪ್ರಯತ್ನದಲ್ಲಿ ಇನ್ನಿಬ್ಬರು ಸಾವನ್ನಪ್ಪಿದ್ದಾರೆ. ತೋರಣಗಲ್ಲು‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!