ರಾಜ್ಯ ರಾಜಧಾನಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ ಮೂವರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಧಾನಿ ಬೆಂಗಳೂರಿನ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ‍ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆಗೆ ಶರಣಾದವರು.
ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಮಹೇಶ್ ಮೂಲತಃ ಮಳವಳ್ಳಿಯವರಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ‌ ಮಹೇಶ್ ಮನೆಯ ರೂಮ್​​ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಮತ್ತೊಂದು ರೂಮ್​​ನಲ್ಲಿ ಜ್ಯೋತಿ ಹಾಗೂ ಮಗ ನಂದೀಶ್ ವಿಷ ಸೇವಿಸಿದ್ದಾರೆ. ಸಾವಿಗೂ ಮುನ್ನ ಅನಾರೋಗ್ಯದಿಂದ ಈ ರೀತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದಿರುವ ಡೆತ್​​ನೋಟ್ ದೊರೆತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಧ್ಯಮ ವರ್ಗದ ಕುಟುಂಬಸ್ಥರಾಗಿರುವ ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಈ ಹಿಂದೆ ಹರ್ನಿಯಾ ಆಪರೇಷನ್ ಮಾಡಿಸಿಕೊಂಡಿದ್ದರು. ಹೊಟ್ಟೆನೋವು ತೀವ್ರವಾಗಿದ್ದರಿಂದ ಇಂದು ಆಸ್ಪತ್ರೆಗೆ ತೆರಳಿದ್ದರು. ವೈದ್ಯಕೀಯ ತಪಾಸಣೆ ವೇಳೆ ಕ್ಯಾನ್ಸರ್ ಇರುವುದು ಗೊತ್ತಾಗಿದೆ.
ಘಟನೆ ಸಂಬಂಧ ಮೂವರ ಮೃತದೇಹಗಳನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!