CRIME | ಕುಡಿದ ಮತ್ತಿನಲ್ಲಿ ಚಾಕು ಇರಿತ ಮೂವರಿಗೆ ಗಾಯ

ಹೊಸದಿಗಂತ ವರದಿ ಚಿತ್ರದುರ್ಗ:

ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಮೂರು ಜನರಿಗೆ ಚಾಕು ಇರಿದು ಗಾಯಗೊಳಿಸಿರುವ ಘಟನೆ ಇಲ್ಲಿಗೆ ಸಮೀಪದ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಕ್ಕದ ಗೊಲ್ಲರಹಟ್ಟಿ ನಿವಾಸಿ ವೀರೇಶ್ ಎಂಬಾತ ಚಾಕು ಇರಿದ ವ್ಯಕ್ತಿ.

ಘಟನೆಯಲ್ಲಿ ಗಾಯಗೊಂಡವರನ್ನು ಪವನ್ (21),  ಮಾರುತಿ (21) ಹಾಗೂ ಮಂಜುನಾಥ್  (23) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಾತಿ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿರಬಹುದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!