ರಾಜ್ಯಾದ್ಯಂತ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಚುನಾವಣಾ ಆರೋಗ ಭಾರೀ ಸಿದ್ಧತೆ ನಡೆಸಿದೆ. ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಇವಿಎಂ ಮತ್ತು ವಿವಿಪ್ಯಾಟ್ ಇರುವ ಸ್ಟ್ರಾಂಗ್‌ರೂಮ್‌ಗಳಲ್ಲಿ ಪೊಲೀಸರೊಂದಿಗೆ ಅರೆಸೇನಾ ಪಡೆಗಳು ಕಾವಲಿವೆ.

ಎಲ್ಲಾ ಕೇಂದ್ರಗಳಿಗೂ ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಸ್ಟ್ರಾಂಗ್‌ರೂಂ ಬಳಿ ಅರೆಸೇನಾ ಪಡೆಗಳು ಇದ್ದರೆ, ಮತ ಎಣಿಕೆ ಕೇಂದ್ರಗಳ ಆವರಣದಲ್ಲಿ ರಾಜ್ಯ ಪೊಲೀಸ್ ಪಡೆಯ ಸಿಬ್ಬಂದಿ ಅಥವಾ ಜಿಲ್ಲಾ ಪೊಲೀಸರು ಇದ್ದಾರೆ.

ಪ್ರತಿ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಕೇಂದ್ರೀಯ ಮೀಸಲು ಪಡೆ ನಿಯೋಜಿಸಲಾಗಿದೆ. ಅಧಿಕೃತ ಪಾಸ್ ಇರುವವರಿಗೆ ಹಾಗೂ ಪಕ್ಷದ ಏಜೆಂಟ್‌ಗಳಿಗೆ ಮಾತ್ರ ಕೇಂದ್ರದೊಳಗೆ ಪ್ರವೇಶವಿದೆ. ಡೋರ್‌ಫ್ರೇಮ್ ಮೆಟಲ್ ಡಿಕೆಕ್ಟರ‍್ಸ್, ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ‍್ಸ್ ಬಳಸಿ ಕೇಂದ್ರದ ಒಳ ಹೋಗುವವರನ್ನು ಪರೀಕ್ಷಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!