ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಜೆಪಿ ನಗರದ 3ನೇ ಬ್ಲಾಕ್ ನಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಸುಕನ್ಯಾ (48), ನಿಖಿತ್ (28), ನಿಶಿತ್ (28) ಮೃತ ದುರ್ದೈವಿಗಳು.

ನಿನ್ನೆ (ಮಾರ್ಚ್ 19) ಸಂಜೆ ಪತಿ ಮನೆಯಲ್ಲಿ ಇಲ್ಲದ ವೇಳೆ ಬ್ಯಾಂಕ್ ಉದ್ಯೋಗಿಗಳು ಮನೆಗೆ ಬಂದು ಸಾಲ ಮರುಪಾವತಿಗೆ ಒತ್ತಾಯಿಸಿದ್ದಾರೆ. ಖಾಸಗಿ ಬ್ಯಾಂಕ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಎಫ್‌ಎಸ್‌ಎಲ್‌ ಸಿಬ್ಬಂದಿ ಹಾಗೂ ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಸ್ಥಳಕ್ಕೆ ಜೆ‌ಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!