ನಿಂತಿದ್ದ ಮಿನಿ ಲಾರಿಗೆ ಯಮನಂತೆ ಎರಗಿದ ಲಾರಿ: ಸ್ಥಳದಲ್ಲೇ ಮೂವರು ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಿಂತಿದ್ದ ಲಾರಿಗೆ ಮಿನಿಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ- ಕೊಟ್ಟೂರು ಮಾರ್ಗಮಧ್ಯೆಯ ಸಾಸಲವಾಡ ಕ್ರಾಸ್ ಬಳಿ ಇಂದು (ಶುಕ್ರವಾರ) ನಡೆದಿದೆ.

ಗಜಾಪುರದ ಮಿನಿಲಾರಿ ಚಾಲಕ ಗುರುವಣ್ಣ(40), ಬತ್ತನಹಳ್ಳಿಯ ತಿಪ್ಪಣ್ಣ(55), ಬಸವರಾಜ್ (25) ಮೃತ ದುರ್ದೈವಿಗಳು.

ಕೊಟ್ಟೂರು ತಾಲೂಕಿನ ಬತ್ತನಹಳ್ಳಿಯ ತಿಪ್ಪಣ್ಣ ಹಾಗೂ ಅವರ ಸಂಬಂಧಿಕರು ಹುಲಿಗಿ ದೇವಾಲಯಕ್ಕೆ ಹೊರಟಿದ್ದರು. ಮಿನಿಲಾರಿ ಹತ್ತಿದ 10 ಜನರು, ಸಾಸಲವಾಡ ಕ್ರಾಸ್ ಬಳಿ ತಮ್ಮ ಸಂಬಂಧಿಕರಿಗಾಗಿ ಕಾಯುತ್ತಿದ್ದರು. ಈ ವೇಳೆ ನಿಂತಿದ್ದ ಮಿನಿ ಲಾರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದಾರೆ.

ಉಳಿದವರಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು, ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯನಗರ ಎಸ್ಪಿ ಶ್ರೀಹರಿಬಾಬು ಬಿಎಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!