ತುಮಕೂರಿನಲ್ಲಿ ದೇವರ ಆರತಿ ಉತ್ಸವ ಪ್ರಸಾದ ಸ್ವೀಕರಿಸಿದ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಮೃತಪಟ್ಟಿದ್ದು, 11ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ. ಗ್ರಾಮದ ತಿಪ್ಪಮ್ಮ (40), ತಿಮ್ಮಕ್ಕ (85) ಗಿರಿಯಮ್ಮ (75) ಮೃತ ದುರ್ದೈವಿಗಳು.

ಶ್ರಾವಣ ಮಾಸ ಹಿನ್ನೆಲೆಯಲ್ಲಿ ಕಳೆದ ಶನಿವಾರ ಗ್ರಾಮದಲ್ಲಿ ದೇವರ ಉತ್ಸವ ಆಯೋಜಿಸಲಾಗಿತ್ತು. ಮುತ್ತರಾಯಸ್ವಾಮಿ, ಕರಿಯಮ್ಮ, ಭೂತಪ್ಪ ದೇವರ ಆರತಿ ಉತ್ಸವ ನಡೆದಿತ್ತು. ಉತ್ಸವದ ವೇಳೆ ಗ್ರಾಮಸ್ಥರು ಪ್ರಸಾದ ಸೇವಿಸಿದ್ದರು.

ಪ್ರಸಾದ ಸೇವಿದ ನಂತರ 14 ಜನರು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದು, ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!