ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರಿಗೆ ಬಸ್ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ನಡೆದಿದೆ.
ಎಮ್ಮಿಗನೂರಿನ ಕನಕರಾಜು, ಮುರುಡಿ ಗ್ರಾಮದ ಶಂಕರ, ಸಂಡೂರು ತಾಲೂಕಿನ ಹೊನ್ನೂರ ಮೃತರು. ಮಧ್ಯರಾತ್ರಿ ಎರಡು ಗಂಟೆಗೆ ರಸ್ತೆ ಕ್ರಾಸ್ ಮಾಡುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.
ಎಸ್ಸಿ ಎಸ್ಟಿ ಹಾಸ್ಟೆಲ್ನ ವಿದ್ಯಾರ್ಥಿಗಳು ಎರಡು ದಿನದ ಹಿಂದೆಯೇ ಹಾಸ್ಟೆಲ್ ಬಿಟ್ಟಿದ್ದರು. ಆ ಸಮಯದಲ್ಲಿ ಅಲ್ಲಿ ಯಾವ ಕಾರಣಕ್ಕೆ ತೆರಳಿದ್ದರು ಎನ್ನುವುದು ತಿಳಿದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.