ಚಂದ್ರಬಾಬು ನಾಯ್ಡು ಕಾರ್ಯಕ್ರಮದಲ್ಲಿ ಮತ್ತೆ ಕಾಲ್ತುಳಿತ: ಮೂವರು ಮಹಿಳೆಯರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲುಗು ದೇಶಂ ಪಕ್ಷದ (TDP) ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರು ಕೈಗೊಂಡ ಸಂಕ್ರಾಂತಿ ಹಬ್ಬದ ಅಂಗವಾಗಿ ಸೀರೆ ಹಂಚುತ್ತಿದ್ದ ಕಾರ್ಯಕ್ರಮದಲ್ಲಿ ಮತ್ತೆ ಕಾಲ್ತುಳಿತ ಉಂಟಾಗಿದ್ದು, ಮೂವರು ಮೃತಪಟ್ಟಿದ್ದಾರೆ.

ಮೊನ್ನೇ ಅಷ್ಟೇ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಮಂದಿ ದುರ್ಮರಣ ಹೊಂದಿದ್ದರು. ಇದರ ಬೆನ್ನಲ್ಲೇ ಇಂದು ಆಂಧ್ರದ ಗುಂಟೂರಿನ ವಿಕಾಸನಗರದಲ್ಲಿ ದುರಂತ ಸಂಭವಿಸಿದೆ.

ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿದ್ದರೆ, ಆಸ್ಪತ್ರೆಯಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ.

ಗುಂಟೂರು ವಿಕಾಸನಗರದಲ್ಲಿ ಟಿಡಿಪಿ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆದಿದೆ. ಈ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಎನ್ ಟಿಆರ್ ಅವರ ಜನತಾ ವಸ್ತ್ರಗಳು ಹಾಗೂ ಚಂದ್ರಣ್ಣ ಸಂಕ್ರಾಂತಿ ಉಡುಗೊರೆ ವಿತರಣೆಯಲ್ಲಿ ಅವ್ಯವಸ್ಥೆ ಉಂಟಾಯಿತು. ಚಂದ್ರಬಾಬು ಭಾಷಣದ ನಂತರ ಪಕ್ಷದ ಮುಖಂಡರು ಚಂದ್ರಣ್ಣ ಅವರಿಂದ ಉಡುಗೊರೆ ಕಳುಹಿಸುವ ಕಾರ್ಯಕ್ರಮವನ್ನು ಕೈಗೆತ್ತಿಕೊಂಡರು. ಇದೇ ವೇಳೆ ಮಹಿಳೆಯರು ಉಡುಗೊರೆ ತೆಗೆದುಕೊಳ್ಳಲು ಮುಂದಾದಾಗ ಕಾಲ್ತುಳಿತ ಉಂಟಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!