June 2, 2026
Tuesday, June 2, 2026
spot_img

ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ವರುಣನ ಆರ್ಭಟ: ರಸ್ತೆಯಲ್ಲೇ ನಿಂತ ನೀರು, ವಾಹನ ಸವಾರರು ಪರದಾಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಬಹುತೇಕ ರಸ್ತೆಗಳು ಭಾರೀ ಮಳೆಗೆ ನೀರು ಸಂಗ್ರಹಗೊಂಡು ವಾಹನ ಸವಾರು ಸುಗಮವಾಗಿ ಸಂಚರಿಸಲು ಪರದಾಡಿದರು.

ನಗರ ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಕೆ.ಆರ್​.ಮಾರ್ಕೆಟ್, ವಿಜಯನಗರ, ಬನಶಂಕರಿ, ಕೆಂಗೇರಿ, ರಾಜಾಜಿನಗರ, ಶಿವಾಜಿನಗರ, ಮಲ್ಲೇಶ್ವರಂ, ಯಲಹಂಕ ಸೇರಿದಂತೆ ವಿವಿಧ ಕಡೆಗಳಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡಿದ್ದು, ವಿವಿಧ ಕಡೆ ಟ್ರಾಫಿಕ್ ಸಮಸ್ಯೆಗಳು ಉಂಟಾಯಿತು.

ದೇವರಬೀಸನಹಳ್ಳಿ ಮೇಲ್ಸೇತುವೆ ರ‍್ಯಾಂಪ್‌ನಲ್ಲಿ ನೀರು

ಭಾರೀ ಮಳೆಯಿಂದಾಗಿ ಹುಣಸಮಾರನಹಳ್ಳಿ , ವರ್ತುರ್ ಕೋಡಿ ಫೋರಮ್ ಮಾಲ್ ರಸ್ತೆ, ದೇವರಬೀಸನಹಳ್ಳಿ ಮೇಲ್ಸೇತುವೆ ರ‍್ಯಾಂಪ್‌ನಲ್ಲಿ ನೀರು ನಿಂತ ಪರಿಣಾಮ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !