ಗುಡುಗು ಸಿಡಿಲಿನ ಆರ್ಭಟ: ಐತಿಹಾಸಿಕ ಸ್ಮಾರಕ ಮೆಹತರ್ ಮಹಲ್ ನ ಮೀನಾರ್ ಮೇಲ್ತುದಿ ಬಿದ್ದು ಕಾರು, ಬೈಕ್ ಜಖಂ

ಹೊಸದಿಗಂತ ವರದಿ,ವಿಜಯಪುರ:

ನಗರದಲ್ಲಿ ಸಂಜೆ ಭಾರಿ ಗುಡುಗು, ಸಿಡಿಲಿನ ಆರ್ಭಟಕ್ಕೆ ಇಲ್ಲಿನ ಜಾಮೀಯಾ ಮಸೀದಿ ರಸ್ತೆಯಲ್ಲಿರುವ ಐತಿಹಾಸಿಕ ಸ್ಮಾರಕ ಮೆಹತರ್ ಮಹಲ್ ನ ಮೀನಾರಿನ ಮೇಲ್ತುದಿ ಬಿದ್ದು ಕಾರು, ಎರಡು ಬೈಕ್ ಜಖಂಗೊಂಡಿರುವ ಘಟನೆ ನಡೆದಿದೆ.

ಬೆಳಗ್ಗೆಯಿಂದ ಬಿರುಬಿಸಿಲಿನಿಂದ ಕೂಡಿದ ವಾತಾವರಣ ಸಂಜೆಯಾಗುತ್ತಿದ್ದಂತೆ ಮೋಡ ಕವಿದು, ಭಾರಿ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆ ಬಿದ್ದಿದೆ.

ಮೆಹತರ ಮಹಲ್ ನ ಮಿನಾರ್ ವೊಂದರ ಮೇಲ್ಭಾಗದಲ್ಲಿ ಮಿಂಚು ಸಹಿತ ಸಿಡಿಲು ಬಡಿದಿದ್ದು, ಆ ಭಾಗದ ಕಲ್ಲುಗಳು ಕೆಳಗೆ ಬಿದ್ದಿವೆ. ಇದರಿಂದಾಗಿ ಸ್ಮಾರಕದ ಎದುರಿನಲ್ಲಿ ನಿಲ್ಲಿಸಲಾಗಿದ್ದ ಒಂದು ಕಾರು ಮತ್ತು ಎರಡು ಬೈಕ್ ಗಳು ಜಖಂ ಗೊಂಡಿವೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.

ಉತ್ತರ ದಿಕ್ಕಿಗೆ ಮುಖ ಮಾಡಿರುವ ಈ ಸ್ಮಾರಕ ಬಲಭಾಗದಲ್ಲಿರುವ ಮಿನಾರ್ ನ ಮೇಲ್ಭಾಗಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.

ಆದಿಲ್ ಶಾಹಿ ಕಾಲದಲ್ಲಿ ಎರಡನೇ ಅಲಿ ಆದಿಲ್ ಶಾಹಿ 17ನೇ ಶತಮಾನದಲ್ಲಿ ಈ ಸ್ಮಾರಕ ನಿರ್ಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!