ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಲೂ ಒಂದು ಹನಿಯೂ ಮಳೆ ಬಾರದೆ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ.
ಇತ್ತ ಕೆಲ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನರು ಮನೆಯಿಂದ ಹೊರಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಜಯಪುರದಲ್ಲಿ ನಿನ್ನೆ ಸುರಿದ ಭಾರೀ ಸಿಡಿಲು ಸಹಿತ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಇಂಡಿ ಪಟ್ಟಣದ ಮಸಳಿ ಗ್ರಾಮದ 16 ವಯಸ್ಸಿನ ಯುವಕ ಬೀರಪ್ಪ ನಿಂಗಪ್ಪ ಅವರಾದಿ ಹಾಗೂ ಮಸಳಿ ಬಿ.ಕೆ.ಗ್ರಾಮದ 45 ವಯ್ಯಸ್ಸಿನ ರೈತ ಸೋಮಶೇಖರ ಪಟ್ಟಣಶೆಟ್ಟಿ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಮಾವಿನಹಳ್ಳಿ ರಸ್ತೆ ಜಲದಪ್ಪನ ಕೆರೆಯ ಜಮೀನಿನಲ್ಲಿ ಭೀರಪ್ಪ ನಿಂಗಪ್ಪ ಮೃತಪಟ್ಟಿದ್ದಾನೆ. ಮೃತ ಭೀರಪ್ಪ ಮನೆಗೆ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಕಲಬುರಗಿ ಃಆಗೂ ಶಿವಮೊಗ್ಗ ನಗರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬಿಸಿಲಿಂದ ಬರಡಾಗಿದ್ದ ಭೂಮಿ ತಂಪಾಗಿದೆ. ಕಲಬುರಗಿಯಲ್ಲಿ ಬಿಸಿಲಿನ ಬೇಗೆಗೆ ಹೈರಾಣಾಗಿದ್ದ ಜನರಿಗೆ ಮಳೆಯ ಸಿಂಚನದಿಂದ ನೆಮ್ಮದಿಯಾಗಿದೆ. ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಸುರಿದ ಮಳೆಗೆ ಇಪ್ಪತ್ತಕ್ಕೂ ಹೆಚ್ಚು ವಾಹನಗಳು ಸ್ಕಿಡ್ ಆಗಿ ಬಿದ್ದಿವೆ.