ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪದ ಮೇಲೆ ಜೈಲು ಸೇರಿದ್ದ ಚೈತ್ರಾ ಹಾಗೂ ಆಕೆಯ ಸಹಚರ ಶ್ರೀಕಾಂತ್ಗೆ ಸೋಮವಾರ ಜಾಮೀನು ಸಿಕ್ಕಿದೆ.
ಇಂದು ಆರೋಪಿ ಚೈತ್ರಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದು, ಆಕೆಯ ಜತೆ ಸಹ ಆರೋಪಿ ಶ್ರೀಕಾಂತ್ ಕೂಡಾ ಬಿಡುಗಡೆಯಾಗಲಿದ್ದಾನೆ.