ಮಡಿಕೇರಿಯಲ್ಲಿ ಹಾಡಹಗಲೇ ಹುಲಿ ದಾಳಿ, ಹಸು ಸಾವು

ಹೊಸದಿಗಂತ ವರದಿ ಮಡಿಕೇರಿ:

ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹಾಡಹಗಲೇ ಹುಲಿ ದಾಳಿ ನಡೆಸಿ ಕೊಂದು‌ ಹಾಕಿರುವ ಘಟನೆ ದಕ್ಷಿಣ ಕೊಡಗಿನಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಪೊನ್ನಂಪೇಟೆ ತಾಲೂಕಿನ ನಿಡುಗುಂಬ ಎಂಬಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸಿ. ಬೋಪಣ್ಣಿ(ಬೋಪಯ್ಯ) ಎಂಬುವರಿಗೆ ಸೇರಿದ ಹಸು ಹುಲಿ ದಾಳಿಗೆ ಸ್ಥಳದಲ್ಲೇ ಅಸು ನೀಗಿದೆ.

ಶನಿವಾರ ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಡಹಗಲೇ ಹುಲಿ ದಾಳಿ ನಡೆಸಿರುವ ಘಟನೆಯಿಂದ ಭಯಭೀತರಾಗಿರುವ ಗ್ರಾಮಸ್ಥರು,‌ಹುಲಿಯನ್ನು ಪತ್ತೆಹಚ್ಚಿ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!