ಹೊಸದಿಗಂತ ವರದಿ,ವಿಜಯಪುರ:
ಟಿಪ್ಪರ್ ವಾಹನ ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಒಂದು ಕಾಲು ಮುರಿದುಕೊಂಡು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ
ದೇವರಹಿಪ್ಪರಗಿ ಪಟ್ಟಣದ ಬಸ್ ನಿಲ್ದಾಣದ ಎದುರುಗಡೆ ನಡೆದಿದೆ.
ಪಟ್ಟಣದ ನಿವಾಸಿ, ಶಿಕ್ಷಕ ದೇಸಾಯಿ ಕಾಲು ಮುರಿದುಕೊಂಡು ತೀವ್ರ ಗಾಯಗೊಂಡ ದುರ್ಧೈವಿ.
ಈ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ವಾಹನ ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಸ್ಥಳೀಯರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ದೇವರಹಿಪ್ಪರಗಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.