ಹೊಸದಿಗಂತ ವರದಿ, ವಿಜಯಪುರ:
ಕೃಷ್ಣಾ ನದಿ ಸೇತುವೆ ಮೇಲಿಂದ ಟಿಪ್ಪರ್ ಕೆಳಬಿದ್ದು, ವಾಹನ ಚಾಲಕ ಸಾವೀಗೀಡಾದ ಘಟನೆ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಬಳಿ ನಡೆದಿದೆ.
ವಾಹನ ಚಾಲಕನ ಹೆಸರು ತಿಳಿದು ಬಂದಿಲ್ಲ, ಕ್ಲೀನರ್ ಗಂಭೀರ ಗಾಯಗೊಂಡಿದ್ದಾನೆ. ಕ್ಲೀನರ್ ನನ್ನು ಚಿಕಿತ್ಸೆಗಾಗಿ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.