ಟೈರ್ ಸ್ಫೋಟಗೊಂಡು ಸೇತುವೆಯಿಂದ ಉರುಳಿಬಿದ್ದ ಕಾರು: ಇಬ್ಬರು ಸಾವು

ಹೊಸದಿಗಂತ ವರದಿ, ದಾವಣಗೆರೆ :

ಟೈರ್ ಸ್ಫೋಟಗೊಂಡು ಕಾರು ಸೇತುವೆ ಮೇಲಿನಿಂದ ಉರುಳಿಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಹುಣಸೇಕಟ್ಟೆ ಸಮೀಪ ಭಾನುವಾರ ತಡರಾತ್ರಿ ನಡೆದಿದೆ.

ಜಿಲ್ಲೆಯ ಹರಿಹರ ತಾಲ್ಲೂಕು ಸಾರಥಿ ಗ್ರಾಮದ ನಿವಾಸಿ ಕೊಟ್ರೇಶಪ್ಪ(60), ಹುಬ್ಬಳ್ಳಿಯ ಈರಮ್ಮ(54) ಮೃತಪಟ್ಟವರು.

ಗಾಯಗೊಂಡಿರುವ ಇನ್ನಿಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯಲ್ಲಿ ಮದುವೆ ಮುಗಿಸಿಕೊಂಡು ತೆರಳುತ್ತಿದ್ದಾಗ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಅತಿ ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಒಮ್ಮೆಲೇ ಸಿಡಿದ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು ಸೇತುವೆ ಮೇಲಿಂದ ಉರುಳಿಬಿದ್ದಿದೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!