ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳಿಗೆ ವಿಷ ಕುಡಿಸಿ ತಂದೆ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋಲಾರದಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶ್ರೀನಿವಾಸಪುರ ತಾಲೂಕಿನ ಶೀಗೇಹಳ್ಳ ಗ್ರಾಮದ ನಾರಾಯಣಸ್ವಾಮಿ (40) ತನ್ನ ಮಕ್ಕಳಾದ ಪವನ್‌ (12) ಹಾಗೂ ನಿತಿನ್‌ಗೆ(10) ವಿಷ ನೀಡಿ ಕೊಂದು ತಾನೂ ಆತ್ಮಹತ್ಯಗೆ ಶರಣಾಗಿದ್ದಾರೆ.

ಕೌಟುಂಬಿಕ ಕಲಹದಿಂದ ಬೇಸತ್ತು ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!