ಬೆಲೆಏರಿಕೆ, ಭ್ರಷ್ಟಾಚಾರದಿಂದ ಬೇಸತ್ತ ಜನ ಆಪ್‌ನತ್ತ ಮುಖ ಮಾಡುತ್ತಿದ್ದಾರೆ: ಭಾಸ್ಕರ್‌ ರಾವ್‌

ಹೊಸದಿಗಂತ ವರದಿ ಹುಬ್ಬಳ್ಳಿ:
ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗದಿಂದ ರಾಜ್ಯದ ಜನರು ಬೇಸತ್ತಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪರ್ಯಾಯವಾಗಿ ಆಪ್ ಪಕ್ಷಕ್ಕೆ ಜನರು ಒಲವು ತೋರಿಸುತ್ತಿದ್ದಾರೆ. ಪಂಜಾಬ್‌ನಂತೆ ಕರ್ನಾಟಕದಲ್ಲಿ ಆಪ್ ಗೆಲುವು ಸಾಧಿಸುತ್ತದೆ ಎಂದು ಆಮ್‌ ಆದ್ಮಿಪಕ್ಷದ ಉಪಾಧ್ಯಕ್ಷ ಭಾಸ್ಕರ್‌ರಾವ್ ಹೇಳಿದರು.

ಆಮ್ ಆದ್ಮಿ ಪಕ್ಷವನ್ನು ಹಳ್ಳಿ ಹಳ್ಳಿಗಳಲ್ಲಿ ಸಂಘಟಿಸಲಾಗುತ್ತಿದೆ. ಯುವ, ಮಹಿಳಾ ಘಟಕ ಸೇರಿದಂತೆ ಹತ್ತು ಘಟಕಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ಮೂಲಕ ಸಾಮಾನ್ಯ ಜನರಿಗೆ ಜವಾಬ್ದಾರಿ ಅವಕಾಶ ನೀಡಲಾಗುತ್ತಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದಲಿತರು, ಕಾರ್ಮಿಕರು ಸೇರಿದಂತೆ ಎಲ್ಲಾ ರೀತಿಯ ಜನರನ್ನು ತಲುಪುತ್ತಿದ್ದೇವೆ. ಪಕ್ಷಕ್ಕೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಕೇವಲ ಒಂದು ಸಮುದಾಯದ ಬೆಂಬಲವನ್ನು ಪಡೆದು ಮುಖ್ಯಮಂತ್ರಿ ಆಗುವ ಚರ್ಚೆ ನಡೆಯುತ್ತಿರುವುದು ಪ್ರಜಾಪ್ರಭುತ್ವ ಮತ್ತು ಜನರಿಗೆ ಮಾಡಿದ ಅವಮಾನ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!