ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯಲು ಟಿಎಂಸಿ ನಿರ್ಧಾರ: ಮಮತಾ ಬ್ಯಾನರ್ಜಿ ವಿರುದ್ಧ ಮಾರ್ಗರೆಟ್ ಆಳ್ವಾ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರ ಉಳಿದಿರುವ ತೃಣಮೂಲ ಕಾಂಗ್ರೆಸ್ ನಿರ್ಧಾರವನ್ನು ಪ್ರತಿಪಕ್ಷ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಟೀಕಿಸಿದ್ದಾರೆ.
ಈ ಕುರಿತಂತೆಟ್ವೀಟ್​ ಮಾಡಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಪಕ್ಷಕ್ಕೆ ಉಪ ರಾಷ್ಟ್ರಪತಿ ಚುನಾವಣೆ ಅಹಂಕಾರ ಅಥವಾ ಕೋಪಕ್ಕೆ ಸಮಯವಲ್ಲ ಎಂದು ನೆನಪಿಸಿದ್ದಾರೆ.
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರವಿರಲು ಟಿಎಂಸಿ ನಿರ್ಧಾರ ನಿರಾಶಾದಾಯಕವಾಗಿದೆ. ಇದು ‘ಅಹಂಕಾರ’, ಅಹಂ ಅಥವಾ ಕೋಪದ ಸಮಯವಲ್ಲ. ಇದು ಧೈರ್ಯ, ನಾಯಕತ್ವ ಮತ್ತು ಏಕತೆಯ ಸಮಯ ಎಂಬುದನ್ನು ನಾನು ನಂಬುತ್ತೇನೆ. ಮಮತಾ ಬ್ಯಾನರ್ಜಿ, ಯಾರು ಧೈರ್ಯದ ದ್ಯೋತಕ, ವಿರೋಧ ಪಕ್ಷದ ಜೊತೆ ನಿಲ್ಲುತ್ತೇನೆ ಎಂದು ಆಳ್ವಾ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!