ಕೇಂದ್ರ ಸಚಿವ ಕಿರಣ್ ರಿಜಿಜು ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್ : 

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ನಡುವೆ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಂದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಿರುದ್ಧ ಇಂದು ವಿಶೇಷ ಹಕ್ಕು ನಿರ್ಣಯವನ್ನು ಮಂಡಿಸಲಾಯಿತು.

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ಅವರು ಗುರುವಾರ ಹಕ್ಕುಚ್ಯುತಿ ನೊಟೀಸ್ ಸಲ್ಲಿಸಿದ್ದಾರೆ.

ಸಾಗರಿಕಾ ಘೋಷ್ ಅವರ ನೋಟಿಸ್‌ಗೆ ಪ್ರತಿಪಕ್ಷಗಳ 60 ನಾಯಕರು ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆ ಸದನದಲ್ಲಿ ಪ್ರತಿಪಕ್ಷಗಳನ್ನು ಉದ್ದೇಶಿಸಿ ಮಾತನಾಡಿದ ಕಿರಣ್ ರಿಜಿಜು, ನೀವೆಲ್ಲರೂ ಈ ಸದನದಲ್ಲಿರಲು ಯೋಗ್ಯರಲ್ಲ ಎಂದು ಹೇಳಿದ್ದರು.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ತಮ್ಮ ಕೈಲಾದಷ್ಟು ಪ್ರಯತ್ನಿಸುವ ಬದಲು ಪ್ರತಿಪಕ್ಷಗಳನ್ನು ಪದೇ ಪದೇ ಅವಮಾನಿಸಿದ್ದಾರೆ ಎಂದು ಘೋಷ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಿಜಿಜು ಅವರು ವಿರೋಧ ಪಕ್ಷದ ಸದಸ್ಯರನ್ನು ಅವಮಾನಿಸಿದ್ದಾರೆ ಮತ್ತು ಸಂಸತ್ತಿನ ಒಳಗೆ ಮತ್ತು ಹೊರಗೆ ಅಸಂಸದೀಯ ಪದಗಳನ್ನು ಬಳಸಿ ನಿಂದಿಸಿದ್ದಾರೆ. ಇದು ಅವರು ಹೊಂದಿರುವ ಉನ್ನತ ಹುದ್ದೆಗೆ ಗೌರವ ತರುವುದಿಲ್ಲ ಮತ್ತು ಅವರ ಸ್ಥಾನದ ಸಂಪೂರ್ಣ ದುರುಪಯೋಗವಾಗಿದೆ ಎಂದು ರಾಜ್ಯಸಭೆಯಲ್ಲಿ TMC ಯ ಉಪನಾಯಕಿ ಹೇಳಿದ್ದಾರೆ.

ಕಿರಣ್ ರಿಜಿಜು ಅವರು ತಮ್ಮ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮತ್ತು ಅಸಂಸದೀಯ ಭಾಷೆ ಬಳಸಿದ್ದಕ್ಕಾಗಿ ನಾನು ಅವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನೊಟೀಸ್ ನೀಡಿದ್ದೇನೆ ಎಂದು ಘೋಷ್ ತಿಳಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!