ರಾಷ್ಟ್ರಪತಿ ಕುರಿತು ಟಿಎಂಸಿ ಸಚಿವರ ಹೇಳಿಕೆ: ವ್ಯಾಪಕ ಆಕ್ರೋಶ ಬೆನ್ನಲ್ಲೇ ಕ್ಷಮೆ ಕೇಳಿದ ಸಿಎಂ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ತೃಣಮೂಲದ ಸಚಿವರ ಹೇಳಿಕೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕ್ಷಮೆಯಾಚಿಸಿದ್ದಾರೆ.

ವೈಯಕ್ತಿಕ ಟೀಕೆಗಳನ್ನು ಮಾಡುವುದು ತನ್ನ ಪಕ್ಷದ ಸಂಸ್ಕೃತಿಯಲ್ಲ. ಸಚಿವ ಹೇಳಿಕೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ ಮತ್ತು ಅವರ ಪರವಾಗಿ ಪಕ್ಷವೂ ಕ್ಷಮೆಯಾಚಿಸುತ್ತದೆ ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್​ನ ಸಚಿವ ಅಖಿಲ್ ಗಿರಿ ಅವರು ಭಾರತದ ರಾಷ್ಟ್ರಪತಿಗಳ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನ ಹೇಳಿಕೆಗಳನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕರು ಇಂದು ಮಧ್ಯಾಹ್ನ ರಾಜಭವನಕ್ಕೆ ಮೆರವಣಿಗೆ ನಡೆಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿರುದ್ಧ ಅಖಿಲ್ ಗಿರಿ ಮಾತನಾತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!