ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ಮತ್ತು ಸೈದ್ದಾಂತಿಕವಾಗಿ ಭಾರತವನ್ನು ಒಡೆಯುವ ಪ್ರಯತ್ನಗಳು ನಡೆದಿವೆ. ಆದರೆ ಭಾರತವನ್ನು ಮುಗಿಸಲು ಯಾವ ಶಕ್ತಿಗೂ ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಭಗವಾನ್ ಶ್ರೀ ದೇವನಾರಾಯಣ ಅವರ 1111ನೇ ಅವತಾರ ಮಹೋತ್ಸವದ ಸ್ಮರಣಾರ್ಥ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ , ನಮ್ಮ ಇತಿಹಾಸ, ನಾಗರಿಕತೆ, ಸಂಸ್ಕೃತಿ ಸಾವಿರಾರು ವರ್ಷಗಳಷ್ಟು ಹಳೆಯದು. ಇದಕ್ಕಾಗಿ ನಾವು ಹೆಮ್ಮೆ ಪಡಬೇಕು. ಆದರೆ ಇಂತಹ ಪುರಾತನ ಇತಿಹಾಸ, ನಾಗರಿಕತೆಯನ್ನು ಒಡೆಯುವ ಪ್ರಯತ್ನಗಳು ನಡೆದಿವೆ. ಯಾವುದೇ ಶಕ್ತಿಗಳು ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.