ಸಿದ್ದರಾಮಯ್ಯರಿಗೆ ಆರ್​ಎಸ್​ಎಸ್​ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಶಾಸಕ ಸೋಮಶೇಖರ ರೆಡ್ಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಧಿಕಾರದಲ್ಲೂ ಇರದೆ ಅತ್ತ ಪಕ್ಷದಲ್ಲಿಯೂ ಸೂಕ್ತ ಸ್ಥಾನಮಾನ ಸಿಗದೇ ಕಂಗಲಾಗಿರುವ ಸಿದ್ದರಾಮಯ್ಯ ಅವರು ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ನೋಡಿದರೆ ಅವರಿಗೆ ಮತಿಭ್ರಮಣೆ ಆಗಿದೆ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆರೋಪಿಸಿದ್ದಾರೆ.
ಬಿಜೆಪಿ ನಾಯಕರು ಸೀಳು ನಾಯಿಗಳು ಎಂದು ಜರಿದ ಸಿದ್ದರಾಮಯ್ಯರ ಟೀಕೆಗೆ ಗಂಗಾವತಿಯಲ್ಲಿ ಪ್ರತಿಕ್ರಿಯೆ ನೀಡಿದ ಶಾಸಕ ರೆಡ್ಡಿ, ನಾಯಿ ವಿಶ್ವಾಸದ ಸಂಕೇತ. ದೇವರ ಸ್ವರೂಪ. ಅಂಥಹ ನಾಯಿಯ ಹೆಸರು ಹೇಳಲು ಕೂಡ ಸಿದ್ದರಾಮಯ್ಯ ಅವರಿಗೆ ನೈತಿಕ ಹಕ್ಕಿಲ್ಲ . ಸಿದ್ದರಾಮಯ್ಯ ಅವರು ತಮ್ಮ ಗೌರವ, ಘನತೆಗಳನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿಯಾಗಿ ಈ ತರಹ ಹಗುರವಾಗಿ ಮಾತುಗಳನ್ನು ಆಡುವುದು ಸರಿ ಅಲ್ಲ. ಆರ್​ಎಸ್​ಎಸ್​ ಬಗ್ಗೆ ಸಿದ್ದರಾಮಯ್ಯ ಮಾತಾಡೋದು ತಪ್ಪು. ಸಂಘ ಪರಿವಾರದ ಬಗ್ಗೆ ಕಿಂಚಿತ್ ಜ್ಞಾನ ಸಿದ್ದರಾಮಯ್ಯರಿಗೆ ಇಲ್ಲ. ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!