ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಬಾಗಲಕೋಟೆ ಜಿಲ್ಲೆ ಇಳಕಲ್ ವಿಜಯಮಹಾಂತೇಶ್ ಮಠದ ಗುರುಮಹಾಂತ ಶ್ರೀಗಳು, ಸಿದ್ದೇಶ್ವರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರ ಮಾತನಾಡಿದ ಅವರು, ಸಿದ್ದೇಶ್ವರ ಶ್ರೀಗಳು ನಾಡಿನ ಮಹಾನ್ ಸಂತರು. ನಡೆದಾಡುವ ದೇವರು. ಅವರಿಗೆ ಜಾತಿಭೇದ ಪಂತವಿಲ್ಲ. ಹಾಗಾಗಿ ಅವರಿಗೆ ಭಾರತ ಸರಕಾರ ಭಾರತರತ್ನ ನೀಡಬೇಕು. ಇದರಿಂದ ಪ್ರಶಸ್ತಿ ಪ್ರಶಸ್ತಿ ಗೌರವ ಹೆಚ್ಚಾಗುತ್ತದೆ. ಆದ್ದರಿಂದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಬೇಕೆಂದು ಆಗ್ರಹಿಸಿದರು.