ಹೊಸ ದಿಗಂತ ವರದಿ, ಅಂಕೋಲಾ:
ಟ್ಯಾಂಕರ್ ಲಾರಿ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ತಾಲೂಕಿನ ನವಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಅಗಸೂರು ಹೊನ್ನಳ್ಳಿ ನಿವಾಸಿ ವೆಂಕಟೇಶ ಚಂದ್ರು ಗೌಡ(42) ಮೃತ ವ್ಯಕ್ತಿ ಯಾಗಿದ್ದು ಬಾವಿ ರಿಂಗ್ ತಯಾರಿಸುವ ಕೆಲಸ ಮಾಡುತ್ತಿದ್ದ ಈತ ಕೆಲಸ ಮುಗಿಸಿ ಮನೆಗೆ ಮದ್ಯಾಹ್ನ ಊಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಟ್ಯಾಂಕರ್ ಲಾರಿ ಚಾಲಕ ಬೇರೊಂದು ಲಾರಿಗೆ ಓವರ್ ಟೇಕ್ ಮಾಡಿ ಅತಿವೇಗದಲ್ಲಿ ರಸ್ತೆಯ ಬಲಕ್ಕೆ ಬಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಪಘಾತ ಪಡಿಸಿದ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲಿ ನಿಲ್ಲಿಸದೇ ಬಾಳೇಗುಳಿ ಬಳಿ ಲಾರಿ ನಿಲ್ಲಿಸಿ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು , ಟ್ಯಾಂಕರ್ ಲಾರಿ ಚಾಲಕ ಮಹಾರಾಷ್ಟ್ರದ ಪರಮೇಶ್ವರ ಕಾತರೆ ಎಂಬಾತನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.