ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ, ಎಲ್ಲರ ಚಿತ್ತ ಹೈಕೋರ್ಟ್​ ತೀರ್ಪಿನತ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಕೇಸ್​​ಗೆ ಇವತ್ತು ಜಡ್ಜ್​ಮೆಂಟ್​​ ಡೇ. ಅದರಲ್ಲೂ ಈ ತೀರ್ಪು ಸಿಎಂ ಸಿದ್ದರಾಮಯ್ಯರ ಭವಿಷ್ಯವನ್ನೇ ನಿರ್ಧರಿಸಲಿದೆ. ಬೆಳಗ್ಗೆ 11 ಗಂಟೆಗೆ ಧಾರವಾಡ ಹೈಕೋರ್ಟ್​​ನಲ್ಲಿ ಮುಡಾ ಕೇಸ್​​​​ನ ತೀರ್ಪು ಪ್ರಕಟವಾಗಲಿದ್ದು ರಾಜಕಾರಣಿಗಳು ತೀರ್ಪಿನತ್ತ ದೃಷ್ಟಿ ನೆಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಪಾಲಿಗೆ ಇವತ್ತು ಬಿಗ್​​​ ಡೇ. ಇತಿಹಾಸದಲ್ಲಿ ದಾಖಲಾಗಿ ಹೋಗುವ ದಿನ. ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದ ತೀರ್ಪು ಅನ್ನು ಧಾರವಾಡ ಹೈಕೋರ್ಟ್ ಪೀಠದಲ್ಲಿ ಪ್ರಕಟವಾಗಲಿದೆ.

ನ್ಯಾಯಮೂರ್ತಿ ನಾಗಪ್ರಸನ್ನರಿಂದ ತೀರ್ಪು ಪ್ರಕಟ ಆಗಲಿದೆ. ಬೆಳಗ್ಗೆ 11ಕ್ಕೆ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ಜನವರಿ 27ರಂದು ಅಂತಿಮ ವಿಚಾರಣೆ ನಡೆದಿತ್ತು. ಇಡೀ ದಿನ ವಾದ- ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳು, ತೀರ್ಪು ಕಾಯ್ದಿರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!