ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಭಾನುವಾರ ಸಂಜೆಯಿಂದಲೇ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಕೊನೆಯ ಕ್ಷಣದಲ್ಲಿ ಭರ್ಜರಿ ಪ್ರಚಾರ ಆರಂಭಿಸಿರುವ ಬಿಜೆಪಿ, 14 ಕ್ಷೇತ್ರಗಳಲ್ಲೂ ಬೈಕ್ ರ್ಯಾಲಿ ಹಾಗೂ ಪಾದಯಾತ್ರೆ ಮೂಲಕ ಮತದಾರರನ್ನು ಸೆಳೆಯುವ ಯತ್ನ ನಡೆಸಲಿದೆ.
ಈ ಕುರಿತು ಮಾಹಿತಿ ನೀಡಿದ ರಾಜ್ಯ ಚುನಾವಣಾ ಆಯೋಗದ ಸಂಯೋಜಕ ವಿ.ಸುನೀಲ್ ಕುಮಾರ್, ಭಾನುವಾರ 14 ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಪ್ರಮುಖರು, ಕಾರ್ಯಕರ್ತರು ಮತದಾರರ ಮನೆ ತಲುಪುವಂತೆ ನೋಡಿಕೊಳ್ಳಲಾಗಿದೆ ಎಂದರು.