ಹೊಸದಿಗಂತ ಡಿಜಿಟಲ್ ಡೆಸ್ಕ್
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನ ಮಾಜಿ ಶಾಸಕ ಕೆಎನ್ ರಾಜಣ್ಣ ಇದೀಗ ತಮ್ಮ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತ ಪಡಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯಿಂದ ಮನಸ್ಸಿಗೆ ನೋವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ. ಅವರ ಕುಟುಂಬಕ್ಕೆ ಅಭಿಮಾನಿಗಳಿಗೆ ಬೇಸರವಾಗಿದ್ದರೇ ವಿಷಾದಿಸುವೆ ಎಂಬುದಾಗಿ ತಿಳಿಸಿದ್ದಾರೆ.
ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡಲಾಗುತ್ತಿದೆ. ತಳ ಸಮುದಾಯದಿಂದ ಬಂದಂತ ನನ್ನನ್ನು ಮುಗಿಸೋ ಷಡ್ಯಂತ್ರ ನಡೆಸಲಾಗುತ್ತಿದೆ. ನನಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಬಗ್ಗೆ ಅಪಾರ ಗೌರವವಿದೆ ಎಂದು ತಿಳಿಸಿದರು.