ಹೊಸ ದಿಗಂತ ವರದಿ, ಮಡಿಕೇರಿ:
ಮರ ಕಪಾತು ಮಾಡುವ ಸಂದರ್ಭ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.
ಪಣಿ ಯರವರ ತೋಲ (38) ಎಂಬವರೇ ಸಾವಿಗೀಡಾದ ಕಾರ್ಮಿಕ.
ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದ ಕಬ್ಬಚ್ಚಿರ ಅಯ್ಯಪ್ಪ ಎಂಬವರ ಕಾಫಿ ತೋಟದಲ್ಲಿ ಮರ ಕಪಾತು ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ವೀರಾಜಪೇಟೆ ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ