ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ವಾರಾಂತ್ಯದಲ್ಲಿ ನಿರ್ಬಂಧ, ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ​ಪರಿಷತ್​ ನೇತೃತ್ವದ 25ನೇ ವರ್ಷದ ದತ್ತಜಯಂತಿ ಆಚರಣೆಗೆ ಚಾಲನೆ ದೊರೆತಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿ ತಾಣಗಳಲ್ಲಿ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಗಾಳಿಕೆರೆ, ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಪ್ರವಾಸಿಗರು ಭೇಟಿ ನೀಡುವುದನ್ನು ಡಿಸೆಂಬರ್​ 11ರ ಬೆಳಗ್ಗೆ 6 ರಿಂದ ಡಿಸೆಂಬರ್​15ರ ಬೆಳಗ್ಗೆ 10 ಗಂಟೆವರೆಗೂ ನಾಲ್ಕು ದಿನಗಳ ಕಾಲ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!