ಹೊಸದಿಗಂತ ವರದಿ ಕಲಬುರಗಿ:
ನಗರದಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಟೌನ್ ಪ್ಲಾನಿಂಗ್ ಆಫೀಸರ್ ಶರಣಪ್ಪ ಮನೆ ಮೇಲೆ ದಾಳಿ ಮಾಡಿದ್ದಾರೆ.
ನಗರದ ಹೊರವಲಯದ ನಾಗನಹಳ್ಳಿ ರಸ್ತೆಯಲ್ಲಿರುವ ಶರಣಪ್ಪ ಅವರ ಫಾರ್ಮ್ ಹೌಸ್ ಮನೆ ಮೇಲೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಫಾರ್ಮ ಹೌಸ್ ನಲ್ಲಿ ಯಾರು ಇಲ್ಲದ ಕಾರಣ ಮನೆಗೆ ಲಾಕ್ ಆಗಿತ್ತು. ಹೀಗಾಗಿ ನಕಲಿ ಕೀ ತಯಾರಕರನ್ನು ಕರೆಸಿ ಪಂಚರ ಸಮ್ಮುಖದಲ್ಲಿ ಬೀಗ ತೆಗೆದು ಮನೆ ಪರಿಶೀಲನೆ ನಡೆಸಿದ್ದಾರೆ.
ಶರಣಪ್ಪ ಫಾರ್ಮ್ ಹೌಸ್ ನ ಒಟ್ಟು 12 ಎಕರೆ ಪ್ರದೇಶದಲ್ಲಿ ಮಾವಿನಹಣ್ಣು, ಸಂತ್ರಾ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆದಿದ್ದಾರೆ. ಸದ್ಯ ಅವರು ಸಿಂಧನೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿಂಧನೂರು, ಕಲಬುರಗಿ ಎರಡೂ ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.