ಟ್ರ್ಯಾಕ್ಟರ್ ಹಿಂಬದಿಯ ಕುಂಟೆ ಬಡಿದು ರೈತ ಸಾವು

ಹೊಸ ದಿಗಂತ ವರದಿ, ವಿಜಯಪುರ:

ಟ್ರ‍್ಯಾಕ್ಟರ್ ಇಂಜಿನ್ ಹಿಂಬದಿ ಅಳವಡಿಸಿದ್ದ ಕಬ್ಬಿಣದ ಕುಂಟೆ ಬಡಿದು ರೈತ ಸಾವಿಗೀಡಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಇಂಗಳಗೇರಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಮಲ್ಲಣ್ಣ ಯರೆಡ್ಡಿ (48) ಮೃತಪಟ್ಟ ರೈತ. ಮಲ್ಲಣ್ಣ ಯರೆಡ್ಡಿ ಈತನು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಚಾಲಕ ಟ್ರ್ಯಾಕ್ಟರ್ ಅನ್ನು ತಿರುಗಿಸಿದಾಗ ಹಿಂದೆ ಇದ್ದ ಕಬ್ಬಿಣದ ಕುಂಟೆ ನೇಗಿಲು ಬಡಿದು ಅಸುನೀಗಿದ್ದಾನೆ.
ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!