ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯ ಚನ್ನಗಿರಿ ತಾಲೂಕಿನಲ್ಲಿ ಓಮ್ನಿ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ನಾರಶೆಟ್ಟಿಹಳ್ಳಿ ಗ್ರಾಮದವರಾದ ರುದ್ರೇಶಪ್ಪ, ಮಲ್ಲಿಕಾರ್ಜುನ್ ಹಾಗೂ ಗಂಗಮ್ಮ ಮೃತರು, ಓಮ್ನಿಯಲ್ಲಿದ್ದ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯ ಹೆದ್ದಾರಿಯಲ್ಲಿ ಭತ್ತದ ಹುಲ್ಲು ತುಂಬಿಕೊಂಡಿದ್ದ ಟ್ರ್ಯಾಕ್ಟರ್ಗೆ ಓಮ್ನಿ ಡಿಕ್ಕಿ ಹೊಡೆದಿದೆ. ಚನ್ನಗಿರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.