ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯಾದ್ಯಂತ ಕಳೆದ ರಾತ್ರಿ ಭಾರಿ ಮಳೆಯಾಗಿದ್ದು. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿದ್ದ ಹಳ್ಳ ದಾಟುವ ದುಸ್ಸಾಹಸ ಮಾಡಿದ ಪರಿಣಾಮ ಟ್ರ್ಯಾಕ್ಟರ್ ಸಮೇತ ಇಬ್ಬರು ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಓರ್ವ ಬಚಾವ್ ಆಗಿದ್ದು, ಇನ್ನೋರ್ವ ಯುವಕ ನೀರಿಗೆ ಬಲಿಯಾಗಿರುವ ಘಟನೆ ಜಿಲ್ಲೆಯ ಕಡಣಿ ಗ್ರಾಮದಲ್ಲಿ ನಡೆದಿದೆ.
ಕಡಣಿ ಗ್ರಾಮದ ಸಿದ್ದಪ್ಪ ಕೆರಂಬಗಿ ಮಳೆ ನೀರಿನ ಸೆಳೆತದಿಂದ ಮೃತಪಟ್ಟ ದುರ್ದೈವಿ ಯುವಕ ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರನಲ್ಲಿದ್ದ ಇಬ್ಬರ ಪೈಕಿ ಚಾಲಕ ಮುಳ್ಳು ಕಂಟಿ ಹಿಡಿದು ಬಚಾವ್ ಆಗಿದ್ದಾನೆ. ಆದರೆ, ಇನ್ನೋರ್ವ ಯುವಕ ನಾಪತ್ತೆಯಾಗಿದ್ದ, ರಾತ್ರಿಯಿಡಿ ಶೋಧಕಾರ್ಯ ನಡೆಸಿದಾಗ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿ ಮುಳ್ಳುಕಂಟಿಯಲ್ಲಿ ದೇಹ ಸಿಲುಕಿರುವದು ಪತ್ತೆಯಾಗಿದೆ.
ಮೃತ ಯುವಕನ ಕುಟುಂಬಸ್ಥರ ಅಕ್ರಂದನ ಹೇಳತೀರದಂತಿದೆ. ಸ್ಥಳಕ್ಕೆ ಫರತಾಬಾದ ಪೊಲೀಸರು ಭೇಟಿನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಫರತಾಬಾದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.