ಮಹಾರಾಷ್ಟ್ರದಲ್ಲಿ ವಿಚ್ಛೇದನ ಹೆಚ್ಚಾಗಲು ಟ್ರಾಫಿಕ್‌ ಸಮಸ್ಯೆ ಕಾರಣ: ಅಮೃತಾ ಫಡ್ನವೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಗುಂಡಿ, ಟ್ರಾಫಿಕ್‌ ಸಮಸ್ಯೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೆಂದ್ರ ಫಡ್ನವೀಸ್‌ ಅವರ ಪತ್ನಿ ಅಮೃತ ಫಡ್ನವೀಸ್‌ ಕಳವಳ ವ್ಯಕ್ತಪಡಿಸಿದ್ದಾರೆ.
ನಾನು ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹೊರಗೆ ಹೋದಾಗ ಇಲ್ಲಿನಗುಂಡಿಗಳು, ಟ್ರಾಫಿಕ್ ಸಹಿತ ಹಲವು ಸಮಸ್ಯೆಗಳನ್ನು ಅನುಭವಿಸುತ್ತೇನೆ. ಟ್ರಾಫಿಕ್ ಸಮಸ್ಯೆಯಿಂದ ಜನರು ತಮ್ಮ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ.ಇದರಿಂದ ಇಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ.ಮುಂಬೈಯಲ್ಲಿ ಮೂರು ಮದುವೆ ಮುರಿದು ಬೀಳಲು ರಸ್ತೆ ಗುಂಡಿ, ಟ್ರಾಫಿಕ್‌ ಸಮಸ್ಯೆ ಕಾರಣ ಎಂದು ಅಮೃತ ಫಡ್ನವೀಸ್‌ ಅಭಿಪ್ರಾಯಪಟ್ಟಿದ್ದಾರೆ.
ಮುಂಬೈನಲ್ಲಿ ಟ್ರಾಫಿಕ್​ ಸಮಸ್ಯೆ ಎಂಬುವುದು ಸಾಮಾನ್ಯವಾಗಿಬಿಟ್ಟಿದೆ. ಇದರಿಂದ ಕುಟುಂಬಸ್ಥರು ಪರಸ್ಪರ ಸಮಯ ಕೊಡಲಾಗುತ್ತಿಲ್ಲ. ಜನಜೀವನದ ಮೇಲೆ ಟ್ರಾಫಿಕ್​ ಸಮಸ್ಯೆ ಭಾರಿ ಪರಿಣಾಮ ಬೀರಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!