ಬೆಳಗಾವಿಯಲ್ಲಿ ದುರಂತ: ಸಾಲದ ಸುಳಿಗೆ ಸಿಲುಕಿ ನೇಕಾರ ಕಾರ್ಮಿಕ ಆತ್ಮಹ*ತ್ಯೆ

ಹೊಸದಿಗಂತ ವರದಿ ಬೆಳಗಾವಿ: ಸಾಲದ ಬಾಧೆಯಿಂದ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ವಡಗಾವಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ವಿಠ್ಠಲ ಲೋಖರಿ ಎಂದು ಗುರುತಿಸಲಾಗಿದೆ. ಮಗ್ಗದ ಕೆಲಸದಿಂದ ದೊರೆಯುತ್ತಿದ್ದ ಅಲ್ಪ ಆದಾಯದಲ್ಲಿ ಕುಟುಂಬ ನಿರ್ವಹಣೆ ಮಾಡುತ್ತಿದ್ದ ಅವರು, ಪತ್ನಿಯ ಅನಾರೋಗ್ಯದ ಚಿಕಿತ್ಸಾ ವೆಚ್ಚ ಹಾಗೂ ಕುಟುಂಬದ ಅಗತ್ಯಗಳಿಗಾಗಿ ಸುಮಾರು 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲದ ಹೊರೆಯಿಂದ ಹೊರಬರಲಾಗದೆ ಆಗಸ್ಟ್ 16ರಂದು ಅವರು ತಾವು ಕೆಲಸ … Continue reading ಬೆಳಗಾವಿಯಲ್ಲಿ ದುರಂತ: ಸಾಲದ ಸುಳಿಗೆ ಸಿಲುಕಿ ನೇಕಾರ ಕಾರ್ಮಿಕ ಆತ್ಮಹ*ತ್ಯೆ