ಹೊಸದಿಗಂತ ವರದಿ ಮಂಡ್ಯ:
ಕಾವೇರಿ ನದಿಯಲ್ಲಿ ಈಜಲು ಹೋಗಿ ನಾಲ್ವರು ಜಲಸಮಾಧಿಯಾಗಿರುವ ಘಟನೆ ಮಳವಳ್ಳಿ ತಾಲೂಕು ಮುತ್ತತ್ತಿ ಬಳಿ ನಡೆದಿದೆ.
ಸಂಜೆ ಸುಮಾರು 5 ಗಂಟೆ ವೇಳೆಯಲ್ಲಿ ಈ ದುರ್ಘನೆ ನಡೆದಿದ್ದು, ಬೆಂಗಳೂರು ಮೂಲದ ನಾಲ್ವರು ಜಲ ಸಮಾಧಿಯಾಗಿದ್ದಾರೆ ಎಂದು ಹೇಳಲಾಗಿದೆ.
ಮೃತರ ಹೆಸರುಗಳು ಇನ್ನೂ ತಿಳಿದುಬಂದಿಲ್ಲ. ಸುದ್ದಿ ತಿಳಿದ ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



