ತುಂಗಭದ್ರೆಯಲ್ಲಿ ದುರಂತ: ಈಜಲು ಹೋಗಿದ್ದ ಮೂವರು ನೀರುಪಾಲು

ಹೊಸದಿಗಂತ ವರದಿ, ದಾವಣಗೆರೆ :

ಬಿಸಿಲಿನ ತಾಪಮಾನ ತಾಳಲಾರದೇ ತುಂಗಭದ್ರ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕು ಹಿರೇಗೋಣಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಸಹೋದರರಾದ ಕಿರಣ್, ವರುಣ್ ಹಾಗೂ ಪವನ್ ಸಾವನ್ನಪ್ಪಿದ ಯುವಕರು. ಇವರು ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ತುಂಗಭದ್ರಾ ನದಿಗೆ ಈಜಲು ತೆರಳಿದ್ದರು. ಆಳವಾದ ಗುಂಡಿ ತಿಳಿಯದ ಯುವಕರು ನೀರಿಗಿಳಿದಿದ್ದರಿಂದ ಪ್ರಾಣ ಕಳೆದುಕೊಂಡಿದ್ದಾರೆ. ನದಿ ದಡದಲ್ಲಿದ್ದ ಬಟ್ಟೆ ಗಮನಿಸಿದ ಸ್ಥಳೀಯರು ಯುವಕರ ಗುರುತನ್ನು ಪತ್ತೆ ಮಾಡಿದ್ದಾರೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಯುವಕರ ಮೃತದೇಹಗಳಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ. ನೀರುಪಾಲಾದ ಮೂವರಲ್ಲಿ ವರುಣ್ ಮೃತದೇಹ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಸ್ಥಳಕ್ಕೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!