ದೀಪಾವಳಿ ಮುನ್ನವೇ ದುರಂತ: ಪಟಾಕಿ ಸಿಡಿದು ಇಬ್ಬರ ಕಣ್ಣಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಸಿಡಿದು ಇಬ್ಬರು ಕಣ್ಣಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೀಪಾವಳಿ ಹಬ್ಬದ ಕಾರಣ ಇಬ್ಬರು ನಿನ್ನೆ ಪಟಾಕಿ ಹೊಡೆಯಲು ಹೋಗಿದ್ದಾರೆ. ಈ ವೇಳೆ ಏಕಾಏಕಿ ಪಟಾಕಿ ಸಿಡಿದು ಸುರೇಶ್ (35) ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಪಟಾಕಿ ಹಚ್ಚುವದನ್ನು ನೋಡುತ್ತಿದ್ದ ಮನೋಜ್ (10) ಎಂಬ ಬಾಲಕನಿಗೂ ಗಂಭೀರ ಗಾಯಗಳಾಗಿದೆ. ಸದ್ಯ, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!