ಅಂತ್ಯಕ್ರಿಯೆಗೆ ಹೋಗಿದ್ದ ವೇಳೆ ದುರ್ಘಟನೆ: ಖಾಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ಕದ್ದ ಖದೀಮರು

ಹೊಸದಿಗಂತ ವರದಿ ಹಾಸನ : ಹಿರಿಯ ಸಹೋದರನ ಅಂತ್ಯಕ್ರಿಯೆಗೆ ಕುಟುಂಬ ಸಮೇತ ಮಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ, ಮನೆ ಖಾಲಿ ಇರುವುದನ್ನು ಗಮನಿಸಿದ ಖದೀಮರು ಸಹೋದರರ ಎರಡು ಮನೆಗಳಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಬೇಲೂರು ತಾಲ್ಲೂಕಿನ ಅರೇಹಳ್ಳಿ ಪಟ್ಟಣದ ರಾಮನಗರದಲ್ಲಿ ನಡೆದಿದೆ. ಮಂಜಪ್ಪ ಹಾಗೂ ಗವಿಯಪ್ಪ ಎಂಬ ಸಹೋದರರು ಹಿರಿಯ ಅಣ್ಣನ ಅಂತ್ಯಕ್ರಿಯೆಗಾಗಿ ಕುಟುಂಬ ಸಮೇತ ಮಂಗಳೂರಿಗೆ ತೆರಳಿದ್ದರು. ಇದೇ ಸಂದರ್ಭವನ್ನು ಬಳಸಿಕೊಂಡ ಕಳ್ಳರು ಮನೆಯ … Continue reading ಅಂತ್ಯಕ್ರಿಯೆಗೆ ಹೋಗಿದ್ದ ವೇಳೆ ದುರ್ಘಟನೆ: ಖಾಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣ, ನಗದು ಕದ್ದ ಖದೀಮರು