ಭೀಮೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸ್ನೇಹಿತರ ದುರಂತ ಅಂತ್ಯ: ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟದ ದೇವಸ್ಥಾನಕ್ಕೆ ತೆರಳುತ್ತಿದ್ದವರು ಸಾವಿಗೀಡಾಗಿದ್ದಾರೆ. ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು. ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟವರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯ ನಿವಾಸಿಗಳಾದ ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.

ಎಂಟು ಮಂದಿ ಸ್ನೇಹಿತರು ಜತೆಯಾಗಿ ಇನ್ನೋವಾ ಕಾರಿನಲ್ಲಿ ಮಂಚೇನಹಳ್ಳಿಯ ಬೀಮೇಶ್ವರ ಬೆಟ್ಟದ ದೇವಸ್ಥಾನಕ್ಕೆ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಲಾರಿಯೊಂದನ್ನು ಒವರ್ ಟೇಕ್ ಮಾಡುವ ವೇಳೆ‌ ಎದುರಿನಿಂದ ಕೆಎಸ್​ಆರ್​ಟಿಸಿ ಬಸ್ ಬಂದಿದೆ. ಬಸ್ ಹಾಗೂ ಲಾರಿಯನ್ನು ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಪಲ್ಟಿಯಾಗಿದ್ದೇ ಘಟನೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!