ವಿಜಯಪುರದಲ್ಲಿ ದಾರುಣ ಘಟನೆ: ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತ್ಯು, ಮತ್ತೊಬ್ಬರಿಗೆ ಗಾಯ

ಹೊಸದಿಗಂತ ವಿಜಯಪುರ:

ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವಿಗೀಡಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೃತಪಟ್ಟವರನ್ನು ಬಂಡು ಕಟಕಧೋಂಡ (35), ಸೋಬು ಶಿಂಧೆ (55) ಎಂದು ಗುರುತಿಸಲಾಗಿದೆ.

ಲಚ್ಯಾಣ ಗ್ರಾಮದ ಪವಾಡ ಪುರುಷ ಸಿದ್ದಲಿಂಗ ಮುತ್ಯಾನ ಜಾತ್ರಾ ಮಹೋತ್ಸವ ನಿಮಿತ್ತ ಗೋಧೋಳಿ ಮುಹೂರ್ತದಲ್ಲಿ ನಡೆದ ಮಹಾರಥೋತ್ಸವ ವೇಳೆ ರಥ ಎಳೆಯುವ ಸಂದರ್ಭ ಆಯತಪ್ಪಿ ರಥದ ಚಕ್ರದಡಿ ಮೂವರು ಸಿಲುಕಿದ್ದಾರೆ.

ಈ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವನಿಗೆ ಗಂಭೀರ ಗಾಯಗೊಂಡಿದ್ದಾನೆ. ಗಂಭೀರ ಗಾಯಾಳುವನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಘಟನೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!