ನಾಳೆಯಿಂದ ಬೆಂಗಳೂರು-ಮೈಸೂರು ನಡುವಿನ ರೈಲುಗಳ ಸಂಚಾರ ತಾತ್ಕಾಲಿಕ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಗೇರಿ-ಹೆಜ್ಜಾಲ ನಡುವೆ ರೈಲ್ವೆ ಕ್ರಾಸಿಂಗ್ ನಿರ್ಮಾಣ ಪ್ರಾರಂಭವಾಗಿದೆ. ಈ ಪರಿಸ್ಥಿತಿಯಿಂದಾಗಿ ಬೆಂಗಳೂರು ಮತ್ತು ಮೈಸೂರು ನಡುವೆ ಕೆಲವು ರೈಲು ಸೇವೆಗಳು ಐದು ದಿನಗಳ ಕಾಲ ಸ್ಥಗಿತಗೊಳ್ಳಲಿವೆ. ಮಾರ್ಚ್ 6, 7, 8, 12 ಮತ್ತು 13 ರಂದು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ.

ಡಾ.ಎಂ.ಜಿ.ಆರ್ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್‌ಪ್ರೆಸ್ ರೈಲು ಮಾರ್ಚ್ 6 ಮತ್ತು 7 ರಂದು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಮಾರ್ಚ್ 7 ಮತ್ತು 8 ರಂದು ಕೆಲವು ಮೈಸೂರು-ಕೆಎಸ್‌ಆರ್ ಬೆಂಗಳೂರು ಮತ್ತು ಮಾರ್ಚ್ 7 ಮತ್ತು 12 ರಂದು ಅರಸೀಕೆರೆ-ಮೈಸೂರು ಎಕ್ಸ್‌ಪ್ರೆಸ್‌ ರೈಲುಗಳು ಸ್ಥಗಿತಗೊಳ್ಳಲಿವೆ. ಮಾರ್ಚ್ 7 ಮತ್ತು 12 ರಂದು ಮೈಸೂರು- ಎಸ್‌ಎಂವಿಟಿ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್ ರೈಲುಗಳು ಸೇರಿದಂತೆ ಹಲವು ಮಾರ್ಗಗಳಲ್ಲಿ ವ್ಯತ್ಯಯವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!