Sunday, December 10, 2023

Latest Posts

ರಾಜ್ಯ ಸರ್ಕಾರದಿಂದ 6 IAS ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್ (Munish Moudgil)​ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಹೆಚ್ಚುವರಿ ಜವಾಬ್ದಾರಿ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್​​ ಅಧಿಕಾರಿ ಮುನೀಶ್ ಮೌದ್ಗಿಲ್​ ಅವರನ್ನು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುನೀಶ್ ಮೌದ್ಗಿಲ್ ಅವರನ್ನು ಬಿಬಿಎಂಪಿಯ ವಿಶೇಷ ಆಯುಕ್ತರನ್ನಾಗಿ ನೇಮಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆ ಮೂಲಕ ಪೌರಕಾರ್ಮಿಕರ ಆದಾಯವನ್ನು ಸುಧಾರಿಸುವತ್ತ ಗಮನಹರಿಸಿದ್ದಾರೆ ಎನ್ನಲಾಗಿದೆ.

6 ಐಎಎಸ್ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ
ಮುನೀಶ್ ಮೌದ್ಗಿಲ್-ಬಿಬಿಎಂಪಿ ವಿಶೇಷ ಆಯುಕ್ತ(ಕಂದಾಯ)
ವಿನೋತ್ ಪ್ರಿಯಾ-ಬಿಬಿಎಂಪಿ ದಕ್ಷಿಣ ವಲಯ ಆಯುಕ್ತೆ
ಕರೀಗೌಡ-ಬಿಬಿಎಂಪಿ ಯಲಹಂಕ ವಲಯ ಆಯುಕ್ತ
ಆರ್​.ಸ್ನೇಹಲ್-ಬಿಬಿಎಂಪಿ ಪೂರ್ವ ವಲಯ ಆಯುಕ್ತೆ
ಪ್ರೀತಿ ಗೆಹ್ಲೋಟ್-ಬಿಬಿಎಂಪಿ ದಾಸರಹಳ್ಳಿ ವಲಯ ಆಯುಕ್ತೆ
ಇಬ್ರಾಹಿಂ ಮೈಗೂರ್-ಬಿಬಿಎಂಪಿ ಮಹದೇವಪುರ ವಲಯ ಆಯುಕ್ತ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!