ನಾಯಿ ವಾಕಿಂಗ್‌ ಗೆ ಸ್ಟೇಡಿಯಂ ಖಾಲಿ ಮಾಡಿಸಿದ ಆಫೀಸರ್‌ ಲಡಾಖ್‌ ಗೆ ಟ್ರಾನ್ಸ್‌ಫರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನಾಯಿ ವಾಕಿಂಗ್‌ ಮಾಡಿಸಲು ಇಡೀ ಸ್ಟೇಡಿಯಂ ಖಾಲಿ ಮಾಡಿಸಿದ್ದ ಐಎಎಸ್‌ ಆಫೀಸರ್‌ ನನ್ನು ಕೇಂದ್ರಾಡಳಿತ ಪ್ರದೇಶ ಲಡಾಖ್ ಗೆ ಟ್ರಾನ್ಸ್‌ಫರ್‌ ಮಾಡಿ ಆದೇಶ ಹೊರಡಿಸಲಾಗಿದೆ.

ಕಾಮನ್‌ ವೆಲ್ತ್‌ ಗೇಮ್ಸ್ ಗೆಂದು ನಿರ್ಮಿಸಿಲಾದ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕ್‌ ಮಾಡುವ ಸಲುವಾಗಿ ಕ್ರೀಡಾಳುಗಳನ್ನು ಹೊರಹಾಕಿ ಇಡೀ ಕ್ರೀಡಾಂಗಣವನ್ನೇ ಖಾಲಿ ಮಾಡಿಸುತ್ತಿದ್ದ ದೆಹಲಿಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ನಡೆ ದೇಶದಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೇಂದ್ರಾಡಳಿತ ಪ್ರದೇಶವಾದ ʼಲಡಾಖ್‌ʼ ಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ಸಿಂಗ್‌ ಈ ಆದೇಶವನ್ನು ಹೊರಡಿಸಿದ್ದಾರೆ. ದೆಹಲಿಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಸಂಜೀವ್‌ ಖೀವಾರ್‌ ಅವರು ಅರುಣಾಚಲ ಪ್ರದೇಶ-ಗೋವಾ-ಮಿಝೋರಾಂ-ಕೇಂದ್ರಾಡಳಿತ ಪ್ರದೇಶ ಕೇಡರ್‌ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಅವರನ್ನು ವರ್ಗಾವಣೆ ಮಾಡಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!