ಹೊಸದಿಗಂತ ವರದಿ ಹಾಸನ :
ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೇಲೂರು ತಾಲ್ಲೂಕಿನ, ಹಗರೆ ಸಮೀಪ ನಡೆದಿದೆ.
ಮಂಜುನಾಥ್ (42) ಮೃತ ದುರ್ದೈವಿ. ಹಾಸನದಿಂದ ಬೇಲೂರು ಕಡೆಗೆ ತೆರಳುತ್ತಿದ್ದ KA-18 F-0092 ನಂಬರ್ನ ಕೆಎಸ್ಆರ್ಟಿಸಿ ಬಸ್ KA-01 J-8925 ನಂಬರ್ನ ಬೈಕ್ನಲ್ಲಿ ಬೇಲೂರಿನಿಂದ ಹಗರೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾ ಮುಖಿ ದಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.