ಸಾರಿಗೆ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ವರದಿ ಹಾಸನ :

ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೇಲೂರು ತಾಲ್ಲೂಕಿನ, ಹಗರೆ ಸಮೀಪ ನಡೆದಿದೆ.

ಮಂಜುನಾಥ್ (42) ಮೃತ ದುರ್ದೈವಿ. ಹಾಸನದಿಂದ ಬೇಲೂರು ಕಡೆಗೆ ತೆರಳುತ್ತಿದ್ದ KA-18 F-0092 ನಂಬರ್‌ನ ಕೆ‌ಎಸ್‌ಆರ್‌ಟಿಸಿ ಬಸ್ KA-01 J-8925 ನಂಬರ್‌ನ ಬೈಕ್‌ನಲ್ಲಿ ಬೇಲೂರಿನಿಂದ ಹಗರೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾ ಮುಖಿ ದಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!